ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಚನ್ನಪಟ್ಟಣ ಬಳಿ ಕಾರು ಹಾಗೂ ಕಂಟೇನರ್ ನಡುವೆ ಅಪಘಾತ ಸಂಭವಿಸಿ ಕೊಡಗಿನ ಪೊನ್ನಂಪೇಟೆ ಸಮೀಪದ ಪೂಕೊಳ ನಿವಾಸಿಗಳಾದ ಪತಿ ಹಾಗೂ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕಾಳಿಮಾಡ ಸೋಮಯ್ಯ ಹಾಗೂ ಸರಸು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸೋಮಯ್ಯ ಹಾಗೂ ಸರಸು ಅವರ ಮಗ ಸಜನ್ ಸೋಮಯ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾರೆ. ಸಜನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ