Download Now Banner

This browser does not support the video element.

ಬೆಂಗಳೂರು ಉತ್ತರ: ವಿಷ್ಣವರ್ಧನ್ ಕರ್ನಾಟಕ ರತ್ನ‌ ಪ್ರಶಸ್ತಿ ನೀಡಲು ಸಂಪುಟ ನಿರ್ಣಯ: ನಗರದಲ್ಲಿ ಹೆಚ್.ಕೆ ಪಾಟೀಲ್

Bengaluru North, Bengaluru Urban | Sep 11, 2025
ನಟ, ಸಾಹಸ ಸಿಂಹ ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಮಾಡಲಾಗಿದೆ. ಎಂದು ಸಚಿವ ಹೆಚ್.ಕೆ ಪಾಟೀಲ್ ಗುರುವಾರ ಸಂಜೆ 5:30ರ ಸುಮಾರಿಗೆ ವಿಧಾನಸೌಧದಲ್ಲಿ ತಿಳಿಸಿದರು. ವಿಷ್ಣುವರ್ಧನ್ ಜೊತೆಗೆ ನಟಿ ಬಿ ಸರೋಜ ದೇವಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ರಾಷ್ಟ್ರ ಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಸಂಪುಟ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ ಮಾಡಿದೆ ಎಂದರು.
Read More News
T & CPrivacy PolicyContact Us