ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಶಾಸಕರುಗಳಾದ ಎಚ್.ಡಿ ತಮ್ಮಯ್ಯ, ಟಿ.ಡಿ ರಾಜೇಗೌಡ, ನಯನಾ ಮೋಟಮ್ಮ ಹಾಗೂ ಎಂಎಲ್ಸಿಗಳಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡ, ಡಿಸಿ ಮೀನಾ ನಾಗರಾಜ್, ಎಸ್ಪಿ ವಿಕ್ರಂ ಅಮಟೆ, ಸಿಇಒ ಕೀರ್ತನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.