ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಈಜೀಪುರ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಘಟಕ ಯಶಸ್ವಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಆಯುಕ್ತರಾದ ಕೆ.ಎನ್ ರಮೇಶ್ ರವರು ತಿಳಿಸಿದರು. ಈಜೀಪುರದಲ್ಲಿರುವ ದ್ವಿತೀಯ ಹಂತದ ಘನತ್ಯಾಜ್ಯ ಘಟಕ ಹಾಗೂ ಸ್ವಯಂ ಚಾಲಿತ ತ್ಯಾಜ್ಯ ವಿಂಗಡಣೆ ಘಟಕಕ್ಕೆ ಭಾನುವಾರ ಬೆಳಗ್ಗೆ 11 ಗಂಟೆ ಸು.ಅರಿಗೆ ಭೇಟಿ ನೀಡಿ ಘಟಕದ ಕಾರ್ಯವೈಖರಿಯನ್ನು ಆಯುಕ್ತ ರಮೇಶ್ ಅವರು ಪರಿಶೀಲನೆ ನಡೆಸಿದರು.