ಚಾಮರಾಜನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಲೋಕಾ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಪ್ರಭಾವತಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಈ ವೇಳೆ ವಿಚ್ಚೇದನ ಹಾಗೂ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ಮೂರು ಜೋಡಿಗಳು ಲೋಕ ಅದಾಲತ್ ನಲ್ಲಿ ಒಂದಾದರು. ಹೊಂಗನೂರು ಗ್ರಾಮದ ತೇಜ ಹಾಗೂ ಮಹೇಶ್ ದಂಪತಿ, ರಾಜಶೇಖರಮೂರ್ತಿ ಸುಮಾ, ಹಾಗೂ ಆಶಾ ಹಾಗೂ ಸೋಮಣ್ಣ ಒಂದಾದರು