ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಾಠಿ ಪ್ರಹಾರ ಖಂಡಿಸಿ ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಿದರು. ನರೇಂದ್ರ ಗ್ರಾಮದಲ್ಲಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಯಾವುದೇ ಗಲಾಟೆ ಇರಲಿಲ್ಲ. ಅಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಲಾಠಿ ಪ್ರಹಾರ ನಡೆಸಲಾಗಿದೆ ಎಂದು ಪ್ರತಿಭ