ಹಳಿಯಾಳ ; ಮೊನ್ನೆ ದಿನ ತಾಲೂಕಿನ ಗಣೇಶ ಗುಡಿಯಲ್ಲಿ ಪತ್ರಕರ್ತೆ ರಾಧಾ ಹಿರೇಗೌಡರ್ ಅವರ ಪ್ರಶ್ನೆಗೆ ಶಾಸಕರಾದ ಆರ್ ವಿ ದೇಶಪಾಂಡೆಯವರು ಅಸಂಬದ್ಧವಾಗಿ ಮಾತನಾಡಿರುವುದಕ್ಕೆ ಮಾಜಿ ಶಾಸಕರಾದ ಸುನಿಲ್ ಹೆಗಡೆಯವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ. ಅವರು ಬುಧವಾರ ಸಂಜೆ 5:00 ಸುಮಾರಿಗೆ ಹಳಿಯಾಳ ಪಟ್ಟಣದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ದೇಶಪಾಂಡೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.