Download Now Banner

This browser does not support the video element.

ಸಾಗರ: ಗಣೇಶ್ ಮೂರ್ತಿಗೆ ಅಪಮಾನ, ಸಾಗರದಲ್ಲಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಪ್ರತಿಕ್ರಿಯೆ

Sagar, Shimoga | Sep 7, 2025
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆರವಣಿಗೆ ಸಂದರ್ಭದಲ್ಲಿ ಗಣೇಶ ಮೂರ್ತಿಗೆ ಬಾಲಕರ ಅಪಮಾನ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಸಾಗರದಲ್ಲಿ ಭಾನುವಾರ ಸಂಜೆ 7 ಗಂಟೆಗೆ ಮಾತನಾಡಿದ ಅವರು ಸಾಗರದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಬಾಲಕರು ಅಪಮಾನ ಮಾಡಿದ್ದಾಗಿ ತಿಳಿದು ಬಂದಿದೆ. ಈ ಘಟನೆ ಕುರಿತು ತಾಯಿ ಹಾಗೂ ಇಬ್ಬರು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ ಎಂದರು. ಈಗಾಗಲೇ ಘಟನೆ ಸಂಬಂಧ ಹಿಂದೂಪರ ಸಂಘಟನೆಗಳ ಮುಖಂಡರ ಜೊತೆಗೂ ಮಾತುಕತೆ ನಡೆಸಲಾಗಿದೆ. ಈ ಘಟನೆಯ ಬಗ್ಗೆ ಹಿಂದೂ ಸಂಘಟನೆಯ ಮುಖಂಡರಿಗೂ ಮನವರಿಕೆ ಮಾಡಿಕೊಡಲಾಗಿದೆ ಎಂದರು.
Read More News
T & CPrivacy PolicyContact Us