Download Now Banner

This browser does not support the video element.

ಯಾದಗಿರಿ: ಯಾದಗಿರಿ ಸೇಡಂ ರಸ್ತೆ ದುರಸ್ತಿ ಕಾರ್ಯ ಆರಂಭ, ಹರ್ಷ ವ್ಯಕ್ತಪಡಿಸಿದ ಸಾರ್ವಜನಿಕರು

Yadgir, Yadgir | Sep 10, 2025
ಯಾದಗಿರಿ ನಗರದಿಂದ ಸೇಡಂ ಹೋಗುವ ರಸ್ತೆ ಸಂಪೂರ್ಣ ಹಾಳಾಗಿ ತಗ್ಗು ಗುಂಡಿಗಳಿಂದ ವಾಹನ ಸವಾರರು ನಿತ್ಯ ಪರದಾಡುವಂತಾಗಿತ್ತು. ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ನೇತ್ರತ್ವದಲ್ಲಿ ಕಳೆದ ಮೂರು ದಿನಗಳ ಹಿಂದೆ ರಸ್ತೆಯಲ್ಲಿನ ಗುಂಡಿಯಲ್ಲಿ ಮಲಗಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗೆ ಎಚ್ಚೆತ್ತ ಲೋಕೋಪಯೋಗಿ ಇಲಾಖೆ ಬುಧವಾರ ರಸ್ತೆ ಗುಂಡಿಗಳ ಮುಚ್ಚುವ ಕಾರ್ಯ ಆರಂಭಿಸಿದ್ದು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಕುರಿತು ಉಮೇಶ್ ಮುದ್ನಾಳ್ ಹಾಗೂ ಇತರರು ಮಾತನಾಡಿ ಗುಂಡಿಗಳನ್ನು ಮುರಂ ಹಾಕಿ ಮುಚ್ಚಿದರೆ ಸಾಲದು ಡಾಂಬರೀಕರಣ ಮಾಡಬೇಕು ಎಂದು ಒತ್ತಾಯಿಸಿದರು.
Read More News
T & CPrivacy PolicyContact Us