ಹುಬ್ಬಳ್ಳಿ: ಗಣೇಶ್ ಚತುರ್ಥಿ ಹಿನ್ನೆಲೆಯಲ್ಲಿ ಹುಧಾ ಪೊಲೀಸ್ ಕಮೀಷನರೇಟ್ ವತಿಯಿಂದ ಹುಬ್ಬಳ್ಳಿಯ ವಿವಿಧೆಡೆ ರೂಟ್ ಮಾರ್ಚ್ ನಡೆಸಲಾಯಿತು. ಹುಬ್ಬಳ್ಳಿಯ ವಿವಿಧೆಡೆ ಗಣೇಶನ ಪ್ರತಿಷ್ಠಾಪನೆ ಹಿನ್ನೆಲೆ ಪ್ರತಿಷ್ಠಾಪನೆ ಮಾಡುವ ಸ್ಥಳಕ್ಕೆ ಹುಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಅವರು ಮಾಹಿತಿಯನ್ನು ಪಡೆದುಕೊಂಡರು. ಈ ವೇಳೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.