Download Now Banner

This browser does not support the video element.

ಬಾಗೇಪಲ್ಲಿ: ಪಟ್ಟಣದ ಜೂನಿಯಾರ್ ಕಾಲೇಜ್ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡದಂತೆ ಎಸ್ಎಫ್ಐ ಮುಖಂಡರು ಬಿಇಒಗೆ ತಾಕೀತು ಮತ್ತು ಮನವಿ ಸಲ್ಲಿಕೆ

Bagepalli, Chikkaballapur | Sep 2, 2025
ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಅಟದ ಮೈದಾನದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಗುರುಭವನ ನಿರ್ಮಾಣ ಯೋಜನೆಯನ್ನು ಕೈಬಿಟ್ಟು ಬೇರೆ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಾಲೂಕು ಎಸ್‌ಎಫ್‌ಐ ಮತ್ತು ಡಿವೈಎಫ್‌ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಎ.ಸೋಮಶೇಖರ್, ಪಟ್ಟಣದಲ್ಲಿರುವ ಸರಕಾರಿ ಬಾಲಕರ ಪ್ರೌಡಶಾಲೆ,ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿದ್ದು ಮೂರು ಸಂಸ್ಥೆಗಳಿಗೆ ಇರುವ ಏಕೈಕ ಅಟದ ಮೈದಾನ ಸರಕಾರಿ ಜೂನಿಯರ್ ಕಾಲೇಜ್ ಮೈದಾನವಾಗಿದೆ ಎಂದರು.
Read More News
T & CPrivacy PolicyContact Us