ಹನೂರು: ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನಲ್ಲಿ ಭಾನುವಾರ ರಾತ್ರಿ8ರವರೆಗೂ ಗಣೇಶ ವಿಸರ್ಜನೆ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿ ಹಾಗೂ ಶಾಂತಿಯುತವಾಗಿ ನಡೆಯಿದ್ದು, ಯಾವುದೇ ಅಹಿತಕರ ಘಟನೆಗಳುವರದಿಯಾಗಿಲ್ಲವೆಂದು ಹರ್ಷದ ವಿಚಾರವಾಗಿದೆ. ಈ ಬಾರಿ ಗಣೇಶೋತ್ಸವದಲ್ಲಿ ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನಲ್ಲಿ ಒಟ್ಟು 382 ಕಡೆಗಳಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ಭಾನುವಾರ ಒಂದೆ ದಿನ 192 ಕಡೆಗಳಲ್ಲಿ ವಿಸರ್ಜನೆ ನಡೆದಿದೆ.ಕೊಳ್ಳೇಗಾಲ ಪಟ್ಟಣ ವ್ಯಾಪ್ತಿಯಲ್ಲಿ 83 ಕಡೆ,ಕೊಳ್ಳೇಗಾಲ ಗ್ರಾಮಾಂತರ ಠಾಣೆ: 99 ಕಡೆ,ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 104 ಕಡೆರಾಮಪುರ ಠಾಣೆಯ ವ್ಯಾಪ್ತಿಯಲ್ಲಿ 75 ಕಡೆ ಮಹದೇಶ್ವರ ಬೆಟ್ಟದಲ್ಲಿಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು.