ಬೀದರ: ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿ ಕೊಳ್ಳುವ ಮೂಲಕ ನಾವು ಆರೋಗ್ಯಕರ ಸಮಾಜ ನಿರ್ಮಿಸಬಹುದು ಆದ್ದರಿಂದ ಕೃಷಿಕರು ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಬೀದರ ತೋಟಗಾರಿಕೆ ವಿಶ್ವವಿದ್ಯಾಲಯದ ಡೀನ್ ಪ್ರೊ. ಎಸ್. ವಿ. ಪಾಟೀಲ್ ಹೇಳಿದರು. ಸೋಮವಾರ ಮಧ್ಯಾಹ್ನ 1 ಗಂಟೆಗೆ ತಾಲೂಕಿನ ಕಮಠಾಣಾದಲ್ಲಿ ಪ್ರಗತಿಪರ ರೈತ ವೈಜೀನಾಥ ನೀಡೋದಕರ ಅವರ ಜಮೀನಿನಲ್ಲಿ ಆಯೋಜಿಸಿದ ಮಾದರಿ ತಾಕು ಹಾಗೂ ನೈಸರ್ಗಿಕ ಕೃಷಿ ಪದ್ಧತಿ ಕಾರ್ಯಕ್ರಮದಲ್ಲಿ ಮಾತನಾಡಿದರು.