ಬಾಗಲಕೋಟೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ, ಬಾಗಲಕೋಟೆ ಶಾಸಕ ಹೆಚ್.ವಾಯ್.ಮೇಟಿ ಅವರು, ಶಾಸಕರ ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯಕ್ಕಾಗಿ ದೇಣಿಗೆ ನೀಡಿದ 10 TVS APACHE ಮೋಟಾರ್ ಸೈಕಲ್ ಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಸಿದ್ದಾರ್ಥ ಗೋಯಲ್,ಹೆಚ್ಚುವರಿ ಎಸ್ಪಿ ಮಹಾಂತೇಶ್ವರ ಜಿದ್ದಿ,ಡಿ.ಎಸ್.ಪಿ ಗಜಾನನ ಸುತಾರ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು,ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.