ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವನ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೂಡಿಗೆರೆ ತಾಲ್ಲೂಕಿನ ಜನ್ನಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ ಹೆದ್ದಾರಿಯಲ್ಲಿ ಆನೆ ಕಾಣಿಸಿಕೊಂಡಿರುವುದರಿಂದ ವಾಹನ ಸವಾರರಲ್ಲಿ ಆತಂಕ ಹೆಚ್ಚಾಗಿದೆ.