ಮುಂಡಗೋಡ ಪಟ್ಟಣದಲ್ಲಿ ಉಳವಿ ಚನ್ನಬಸವಣ್ಣ ವೇದಿಕೆ ವತಿಯಿಂದ ಶನಿವಾರ ಸಂಜೆ 7ಕ್ಕೆ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಪಾಲ್ಗೊಂಡಿದ್ದರು. ಈ ವೇಳೆ ಶಾಸಕರು ಜಗಜ್ಯೋತಿ ಬಸವಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಬಯಲು ರಂಗ ಮಂದಿರದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉಳವಿ ಚನ್ನಬಸವಣ್ಣ ವೇದಿಕೆ ಸದಸ್ಯರು ಅಭಿಯಾನದಲ್ಲಿ ಭಾಗಿಯಾಗಿದ್ದರು.