Download Now Banner

This browser does not support the video element.

ತುಮಕೂರು: ಗೂಂಡಾಗಳ ಮೇಲಿನ ಪ್ರಕರಣಗಳನ್ನ ಸರ್ಕಾರ ವಾಪಸ್ ಪಡೆದಿದ್ದರಿಂದ ಮದ್ದೂರು ಗಲಭೆಗೆ ಕಾರಣವಾಯಿತು: ನಗರದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ

Tumakuru, Tumakuru | Sep 12, 2025
ಗೂಂಡಾಗಳ ಮೇಲೆ ಹಾಕಿದ್ದ ಪ್ರಕರಣವನ್ನು ಸಚಿವ ಸಂಪುಟದಲ್ಲಿ ಸರ್ಕಾರ ಹಿಂತೆಗೆದುಕೊಂಡಿದ್ದರಿಂದಲೇ ಮದ್ದೂರು ಗಲಭೆಗೆ ಕಾರಣವಾಯಿತು ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪ ಮಾಡಿದರು.ಅವರು ತುಮಕೂರಿನ ಕ್ಯಾಸಂದ್ರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗಸ್ವಾಮೀಜಿಯವರ ಆಶೀರ್ವಾದ ಪಡೆದು ಬಳಿಕ ಶುಕ್ರವಾರ ಮಧ್ಯಾಹ್ನ 3.30 ರ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ಎಸೆದುದವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬ್ರದರ್ಸ್ ಆಗಿದ್ದಾರೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಂತಿಧೂತರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.ಮದ್ದೂರಿನಲ್ಲಿ ಗಲಭೆ ಪೂರ್ವ ನಿಯೋಜಿತವಾಗಿದೆ ಎಂದರು.
Read More News
T & CPrivacy PolicyContact Us