ಬುಧವಾರ ರಾತ್ರಿ ಸುರಿದ ಮಹಾಮಳೆಯಿಂದಾಗಿ ಯಾದಗಿರಿ ತಾಲೂಕಿನ ಚಾಮನಹಳ್ಳಿ, ಬಾಚವಾರ ಯರಗೋಳ ಗ್ರಾಮದ ಸೇತುವೆಗಳು ಮುಳುಗಡೆಯಾಗಿದ್ದು, ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಗುರುವಾರ ಮಧ್ಯಾಹ್ನ ಈ ಸೇತುವೆಗಳಿಗೆ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ ಭೇಟಿ ನೀಡಿ ಜಿಟಿ ಜಿಟಿ ಮಳೆಯಲ್ಲಿಯೇ ಜಮೀನುಗಳಲ್ಲಿನ ನೀರಲ್ಲಿ ನಿಂತು ಸಾಂಕೇತಿಕ ಪ್ರತಿಭಟನೆ ನಡೆಸಿ ಬೆಳೆ ಹಾನಿಯಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸೇತುವೆಗಳನ್ನು ಮೇಲ್ದರ್ಜೆಗೇರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಅನೇಕ ಜನ ರೈತರು ಕೂಡ ಭಾಗವಹಿಸಿದ್ದರು.