ನರಸಿಂಗಪೇಠ ಹೊರವಲಯದಲ್ಲಿ ಬೈಕ್ ಟ್ರ್ಯಾಕ್ಟರ್ ನಡುವೆ ಅಪಘಾತ ಓರ್ವ ಯುವಕನಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಯಾದಗಿರಿ ಜಿಲ್ಲೆಯ ಸುರಪುರ ನಗರದ ನರಸಿಂಗಪೇಠ ಹೊರವಲಯದಲ್ಲಿ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಜರುಗಿದೆ ಅಪಘಾತದಲ್ಲಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು ಇನ್ನುಳಿದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಗಾಯಾಳುಗಳನ್ನು ಸುರಪುರ ತಾಲೂಕ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ. ಗಾಯಾಳುಗಳ ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದವರು ಎಂದು ತಿಳಿದು ಬಂದಿದೆ.