ಮದ್ದೂರು : ತಾಲೂಕಿನ ಕೊಪ್ಪ ಹೋಬಳಿ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ ತಾಲ್ಲೂಕಿನ ಹೊಸಗಾವಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಏರ್ಪಾಡಾಗಿತ್ತು. ಮಂಗಳವಾರ ಮಧ್ಯಾಹ್ನ 2.30 ರ ಸಮಯದಲ್ಲಿ ಏರ್ಪಾಡಾಗಿದ್ದ ಈ ಕ್ರೀಡಾಕೂಟವನ್ನು ಕೆಂಪೇಗೌಡ ವಿಮಾನ ನಿಲ್ದಾಣದ ಅಧಿಕಾರಿ ಜಿ ಎಂ ಜಯರಾಮು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಶ್ರದ್ದೆ ಹಾಗೂ ಏಕಾಗ್ರತೆಯಿಂದ ವಿದ್ಯಾಭ್ಯಾಸ ಹಾಗೂ ಕ್ರೀಡೆಯಲ್ಲಿ ಭಾಗವಹಿಸುವ ಮನಸ್ಸನ್ನು ಪ್ರತಿಯೊಬ್ಬ ಪ್ರತಿಯೊಬ್ಬ ವಿದ್ಯಾರ್ಥಿಯೂ ಇಂದಿನಿಂದಲೇ ರೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.