Download Now Banner

This browser does not support the video element.

ಹಾಸನ: ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಸಭೆ: ನೂರಾರು ಅರ್ಜಿಗಳು ಸ್ಥಳದಲ್ಲಿ ವಿಲೇವಾರಿ

Hassan, Hassan | Sep 6, 2025
ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಭೆ ನಡೆಯಿತು. ಸಭೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಭಾಗವಹಿಸಿ ಸಚಿವರಿಗೆ ತಮ್ಮ ಅಹವಾಲುಗಳನ್ನು ನೀಡಿದರು, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ, ಗ್ರಾಮ ಪಂಚಾಯತ್, ಪೆನ್ಶನ್, ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ನೀಡಿದರು. ಸಭೆಯಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿದ್ದು ಜನರಿಂದ ಬಂದ ಸಮಸ್ಯೆಗಳ ಅರ್ಜಿಗಳಿಗೆ ಸ್ಥಳದಲ್ಲೇ ಉತ್ತರಿಸಿ ಅಲ್ಲೇ ಬಗೆಹರುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಸಚಿವ ಕೃಷ್ಣ ಬೈರೇಗೌಡ ಪಾತ್ರರಾದರು.
Read More News
T & CPrivacy PolicyContact Us