ಕೃತಪುರ ತಿಲಕ, ಶ್ರೀ ಶಿರಡಿ ಸಾಯಿಬಾಬಾ ಮಂದಿರ, ಕೃತಪುರ ಸೇವಾ ಸಮಿತಿ, 3ನೇ ವರ್ಷದ ಗಜಾನನೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಗಣ್ಯರಿಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ವೇಳೆ ಮಿಮಿಕ್ರಿ ಕಲಾವಿದರೊಬ್ಬರು ಕೊಪ್ಪಳದ ಗವಿಶ್ರೀಗಳ ರೀತಿ ಮಾತನಾಡಿ ಪ್ರೇಕ್ಷಕರನ್ನು ನಿಬ್ಬೆರಗಾಗುವಂತೆ ಮಾಡಿದರು.