Download Now Banner

This browser does not support the video element.

ಬೆಂಗಳೂರು ಉತ್ತರ: ವಾರಸುದಾರರಿಲ್ಲದ ವಾಹನಗಳನ್ನ ಗುರುತಿಸಿ ಪೊಲೀಸ್ ಸಂಚಾರ ವಿಭಾಗಕ್ಕೆ ಪಟ್ಟಿ ನೀಡಿ : ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್

Bengaluru North, Bengaluru Urban | Sep 10, 2025
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಸುದಾರರಿಲ್ಲದೆ ನಿಂತಿರುವ ವಾಹನಗಳನ್ನ ಪಟ್ಟಿ ಮಾಡಿ ಸಂಚಾರ ಪೊಲೀಸ್ ವಿಭಾಗಕ್ಕೆ ನೀಡುವಂತೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 10ರಂದು ಬೆಳಿಗ್ಗೆ 9 ಗಂಟೆಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು,'ಬಹಳ ದಿನಗಳಿಂದ ರಸ್ತೆ ಬದಿ ನಿಂತಿರುವಂತಹ ವಾರಸುದಾರರಿಲ್ಲದ ವಾಹನಗಳಿಂದ ಸುಗಮ ಸಂಚಾರಕ್ಕೆ ಸಾಕಷ್ಟು ಸಮಸ್ಯೆ ಆಗಲಿದೆ. ಅಂಥವುಗಳ ಪಟ್ಟಿ ತಯಾರಿಸಿ ಸಂಚಾರ ಪೊಲೀಸ್ ವಿಭಾಗಕ್ಕೆ ನೀಡಿ' ಎಂದು ಅಧಿಕಾರಿಗಳಿಗೆ ಸೂಚಿಸಿದರು.
Read More News
T & CPrivacy PolicyContact Us