ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ಮುಂಭಾಗದ ಆಟೋ ಟಿಪ್ಪರ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೆಜೆಸ್ಟಿಕ್ ಪ್ರದೇಶದಲ್ಲಿ ಪಾದಚಾರಿಗಳ ಸಂಚಾರ ಹೆಚ್ಚು ಇರುವುದರಿಂದ ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಇದರಿಂದ ಜನರು ಪಾದಚಾರಿ ಮಾರ್ಗದ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವವರ ಸಂಖ್ಯೆ ಕಡಿಮೆಯಾಗಿ ಸ್ವಚ್ಛತೆ ಕಾಪಾಡಬಹುದಾಗಿದೆ ಎಂದು ತಿಳಿಸಿದರು.