ಹನೂರು: ತಾಲೂಕಿನ ಗಾಜನೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ಗ್ರಾಮದಲ್ಲಿ ಗುರುವಾರ ತಡರಾತ್ರಿ ಕಾಡಾನೆಗಳು ಬಂದು, ರೈತ ಕಾಮರಾಜು ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಫಸಲನ್ನು ಸಂಪೂರ್ಣವಾಗಿ ನಾಶಪಡಿಸಿರುವ ಘಟನೆ ನಡೆದಿದೆ. ಅರಣ್ಯದಿಂದ ಆಗಮಿಸಿದ ಕಾಡಾನೆಗಳು ಜಮೀನಿಗೆ ನುಗ್ಗಿ ಹಲವಾರು ಬಾಳೆ ಗಿಡಗಳನ್ನು ಮುರಿದು ಹಾಕಿರುವ ಜೊತೆಗೆ ತುಳಿದು ನಾಶ ಪಡಿಸಿವೆಈ ಪರಿಣಾಮವಾಗಿ ರೈತರಿಗೆ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ಈ ಘಟನೆ ಬಗ್ಗೆ ಸಂಬಂಧಿತ ಅರಣ್ಯ ಇಲಾಖೆ ಯಾವುದೇ ತುರ್ತು ಕ್ರಮ ಕೈಗೊಂಡಿಲ್ಲ ಎನ್ನುವ ಆರೋಪ ಸ್ಥಳೀಯರಿಂದ ಕೇಳಿಬರುತ್ತಿದೆ.