ಅನ್ಯಜಾತಿಯವರಿಗೆ ಪರಿಶಿಷ್ಟರ ಪ್ರಮಾಣ ಪತ್ರವನ್ನು ನೀಡುವುದನ್ನು ನಿಲ್ಲಿಸಬೇಕು. ಅಲ್ಲದೇ, ಅನ್ಯಜಾತಿಯನ್ನು ಸೇರ್ಪಡೆ ಮಾಡಬಾರದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕಾ ಘಟಕದಿಂದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಹಶೀಲ್ದಾರರಿಗೆ ಶುಕ್ರವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಮನವಿ ಸಲ್ಲಿಸಿದರು. ತಾಲೂಕಾ ಅಧ್ಯಕ್ಷ ರವಿ ನಾಯಕೋಡಿ ಮಾತನಾಡಿ, ಕಳೆದ ಏಳು ದಶಕಗಳಿಂದ ಸಮಾಜದ ಮೇಲೆ ದಬ್ಬಾಳಿಕೆ ನಿರಂತರ ನಡೆಯುತ್ತಿದೆ. ನಮ್ಮ ಹಕ್ಕನ್ನು ಪಡೆದುಕೊಳ್ಳುವುದಕ್ಕಾಗಿ ಹೋರಾಟಕ್ಕಿಳಿಯಬೇಕಾಗಿದೆ.ಬೇಸ್ತ, ಅಂಬಿಗ, ಕಬ್ಬಲಿಗ, ಕೋಲಿ ಪ್ರವರ್ಗರಲ್ಲಿ ಬರುತ್ತಿದ್ದು, ಅವರಿಗೆಲ್ಲ ಎಸ್ಟಿ ಪ್ರಮಾಣ ಪತ್ರವನ್ನು ನೀಡುವುದು ನಿಲ್ಲಿಸಬೇಕು. ನಕಲಿ ಪ್ರಮಾಣ ಪತ್ರ ನೀಡಿದ ಅಧಿಕಾರಿ ಮೇಲೆ ಕ್ರಮ ಆಗಬೇಕು ಎಂದರು.