ದಾಂಡೇಲಿ : ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಶ್ರೀ ಗಣೇಶನ ವಿಸರ್ಜನಾ ಮೆರವಣಿಗೆಗೆ ಡಿಜೆ ಅಳವಡಿಕೆಗೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಿ ದಾಂಡೇಲಿಯ ಸರ್ವ ಗಣೇಶ ಮಂಡಳಗಳ ಒಕ್ಕೂಟದಿಂದ ಇಂದು ಶುಕ್ರವಾರ ಬೆಳಿಗ್ಗೆ 10:30 ಗಂಟೆ ಸುಮಾರಿಗೆ ಮನವಿಯನ್ನು ಸಲ್ಲಿಸಲಾಯಿತು. ಮೊದಲು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿಯವರಿಗೆ, ಬಿಜೆಪಿ ತಾಲೂಕು ಅಧ್ಯಕ್ಷ ಬುದವಂತಗೌಡ ಪಾಟೀಲ್ ಅವರಿಗೆ ಮನವಿಯನ್ನು ಸಲ್ಲಿಸಿದ ಬಳಿಕ ಶಾಸಕರಾದ ಆರ್ ವಿ ದೇಶಪಾಂಡೆ ಅವರಿಗೆ ಅವರ ಆಪ್ತ ಸಹಾಯಕರ ಮೂಲಕ ಹಾಗೂ ಮಾಜಿ ಶಾಸಕರಾದ ಸುನೀಲ ಹೆಗಡೆಯವರಿಗೆ ಲಿಖಿತ ಮನವಿಯನ್ನು ನೀಡಿ, ಡಿಜೆ ಬಳಕೆಗೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಲಾಯಿತು. ಒಂದಾನೋ ವೇಳೆ ಈ ಬಾರಿ ಡಿಜೆ ಬಳಕೆಗೆ ಅವಕಾಶ ಮಾಡಿಕೊಡದಿದ್ದಲ್ಲಿ ಮುಂ