ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ಮಾಡುವ ಮೂಲಕ ಕೊರಮ ಕೊಂಚ ಲಂಬಾಣಿ ಸಮಾಜ ಗಳಿಗೆ ಅನ್ಯಾಯ ಮಾಡಿದ್ದಾರೆ. ಒಳ ಮೀಸಲಾತಿಯಿಂದ ಈ ಸಮಾಜಕ್ಕೆ ಅನ್ಯಾಯವಾಗಿದೆ ಹೀಗಾಗಿ ಕೂಡಲೇ ಒಳಮಿಸಲಾತಿಯನ್ನು ಮರು ಪರಿಚಲನೆ ಮಾಡಬೇಕು ಎಂದು ವಿಜಯಪುರದಲ್ಲಿ ಭಾನುವಾರ ಮಧ್ಯಾಹ್ನ 3:00 ಸುಮಾರಿಗೆ ಕಾಂಗ್ರೆಸ್ ಮುಖಂಡ ಬಾಬು ರಾಜೇಂದ್ರ ನಾಯಕ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು. ಈ ಕುರಿತು ಮರು ಪರಿಶೀಲನೆ ಮಾಡದಿದ್ದರೆ, ಮುಂಬರುವ ದಿನಗಳಲ್ಲಿ ರಾಜ್ಯವ್ಯಾಪ್ತಿ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.