ಚಿಂತಾಮಣಿ ನಗರದಲ್ಲಿ ಧರ್ಮಸ್ಥಳಕ್ಕೆ ಅಪಮಾನ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಸೋಮವಾರ ನಡೆಸಲಾಯಿತು. ಈ ವೇಳೆ ಬಿಜೆಪಿ ಮುಖಂಡ ವೇಣುಗೋಪಾಲ್ ಮಾತನಾಡಿ ಇತ್ತೀಚಿಗೆ ಧರ್ಮಸ್ಥಳಕ್ಕೆ ಕಳಂಕ ತರುವ ನಿಟ್ಟಿನಲ್ಲಿ ಹಲವರು ಷಢ್ಯಂತರವನ್ನು ಯೋಜಿತವಾಗಿ ರೂಪಿಸಿದ್ದಾರೆ. ಇಲ್ಲಸಲ್ಲದ ಆರೋಪ ಮಾಡಿಕೊಂಡು ಪುಣ್ಯ ಕ್ಷೇತ್ರಕ್ಕೆ ಕೆಟ್ಟ ಹೆಸರು ತರಲಾಗುತ್ತಿದೆ ಎಂದರು.