Download Now Banner

This browser does not support the video element.

ಬೀದರ್: ಅತಿವೃಷ್ಟಿಯಿಂದ ಅಪಾರ ಹಾನಿ, ಕೂಡಲೇ ಪರಿಹಾರ ನೀಡಿ ; ನಗರದಲ್ಲಿ ಯುವ ಕ್ರಾಂತಿ ಸಂಘಟನೆ ಸಿಎಂಗೆ ಮನವಿ

Bidar, Bidar | Sep 1, 2025
ಬೀದರ್ : ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೀದರ್ ಜಿಲ್ಲೆಯಲ್ಲಿ ರೈತರು ಬೆಳೆದ ಹೆಸರು, ಉದ್ದು, ತೊಗರಿ, ಸೋಯಾಬೀನ್ ಸೇರಿದಂತೆ ಸಾವಿರಾರು ಎಕರೆಯ ಬೆಳೆ ನಾಶವಾಗಿದೆ. ಅತಿವೃಷ್ಟಿಯಿಂದ ನೂರಾರು ಮನೆಗಳು, ರಸ್ತೆ-ಸೇತುವೆಗಳು ಹಾಗೂ ಮೂಲಸೌಕರ್ಯಗಳಿಗೆ ಹಾನಿಯಾಗಿದೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಧಾನ್ಯ ಹಾಳಾಗಿದ್ದು, ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಯುವ ಕ್ರಾಂತಿ ಸಂಘಟನೆ ಸೋಮವಾರ ಮಧ್ಯಾಹ್ನ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ.
Read More News
T & CPrivacy PolicyContact Us