Download Now Banner

This browser does not support the video element.

ಸಾಗರ: ಸಾಗರದಲ್ಲಿ ಗುಂಡಿ ಮುಚ್ಚುವಂತೆ ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ

Sagar, Shimoga | Oct 6, 2025
ಬಿ.ಎಚ್.ರಸ್ತೆಯಲ್ಲಿ ಬಿದ್ದಿರುವ ಗುಂಡಿಯನ್ನು ಮುಚ್ಚುವಂತೆ ಒತ್ತಾಯಿಸಿ ಸೋಮವಾರ ಸಂಜೆ 4 ಗಂಟೆಗೆ ಸಾಗರ ನಗರದಲ್ಲಿ ಸ್ಥಳೀಯರು ರಸ್ತೆಯಲ್ಲಿ ಗಿಡನೆಟ್ಟು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 206 ಸಂಪೂರ್ಣವಾಗಿ ಗುಂಡಿ ಬಿದ್ದು ಅಪಘಾತವಾಗಿ ಸಾವು ನೋವು ಸಂಭವಿಸುತ್ತಿದ್ದರೂ ಗಮನ ಹರಿಸದ ಅಧಿಕಾರಿಗಳ ವಿರುದ್ದ ಸಾರ್ವಜನಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್, ಕಳೆದ ಮೂರು ವರ್ಷಗಳ ಹಿಂದೆ ತ್ಯಾಗರ್ತಿ ಕ್ರಾಸ್‌ನಿಂದ ಎಲ್.ಬಿ.ಕಾಲೇಜುವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಸುಮಾರು 80 ಕೋಟಿ ರೂ. ಬಿಡುಗಡೆಯಾಗಿದೆ.
Read More News
T & CPrivacy PolicyContact Us