ಇತ್ತಿಚೆಗೆ ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಲೆ ಗಲ್ಲಿಯ ಯುವಕ ಶುಭಂ ಸಂಕಪಾಳ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗಳಿಗೆ ಇಂದು ಗಜಾನನ ಮಹಾಮಂಡಳ ಸಂಸ್ಥಾಪಕರು ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಮಹಾಮಂಡಳ ಪದಾಧಿಕಾರಿಗಳು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಹಾಮಂಡಳದ ವತಿಯಿಂದ ಹಣಕಾಸಿನ ನೆರವು ನೀಡಿದರು..