Download Now Banner

This browser does not support the video element.

ಬೆಂಗಳೂರು ಉತ್ತರ: ಸಂಪುಟ ಪುನಾರಚನೆ ಸಿಎಂ‌ ವಿವೇಚನೆಗೆ ಬಿಟ್ಟ ವಿಚಾರ: ಸಚಿವ ಪರಮೇಶ್ವರ್

Bengaluru North, Bengaluru Urban | Sep 30, 2025
ಸಂಪುಟ ಪುನಾರಚನೆ ಬಗ್ಗೆ ಕಬೀರ್ ಅಹಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಂಗಳವಾರ ಮದ್ಯಾಹ್ನ 2 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪರಮೇಶ್ವರ್ ಅವರು ಸಂಪುಟ ಪುನಾರಚನೆ ಅಥಚಾ ವಿಸ್ತರಣೆ ಮಾಡೋದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಇದೆಲ್ಲ ನಮ್ಮ ವ್ಯಾಪ್ತಿಗೆ ಬರೋದಿಲ್ಲ, ನಮಗೆ ಗೊತ್ತೇ ಆಗೋದಿಲ್ಲ, ಕೆಲವರು ಅವರವರ ಅಭಿಪ್ರಾಯ ಹೇಳ್ತಾರೆ. ಎರಡೂವರೆ ವರ್ಷಕ್ಕೆ ಸಂಪುಟ ಪುನಾರಚನೆ ಆಗಬೇಕು ಅಂತ ಹೇಳ್ಕೊಂಡು ಬರ್ತಿದ್ದಾರಲ್ಲ ಇದರ ಬಗ್ಗೆ ನಮಗ್ಯಾರಿಗೂ ಗೊತ್ತೇ ಇಲ್ಲ. ಹೈಕಮಾಂಡ್ ನವ್ರು ಯಾರೂ ಹೇಳಿಲ್ಲ, ಅಥವಾ ಸಿಎಂ ಆಗಲೀ ಅಧ್ಯಕ್ಷರಾಗಲೀ ನಮಗೆ ಇದರ ಬಗ್ಗೆ ಹೇಳಿಲ್ಲ. ಒಳಗೆ ಅವರು ಏನು ಅಂಡರ್‌ಸ್ಟ್ಯಾಂಡಿಂಗ್‌ಗೆ ಬಂದಿದ್ದಾರೋ ಗೊತ್ತಿಲ್ಲ ಎಂದರು.
Read More News
T & CPrivacy PolicyContact Us