Download Now Banner

This browser does not support the video element.

ಸಾಗರ: ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಾಗರದ ನಿವೃತ್ತ ಉದ್ಯೋಗಿ, ಕಾರಣ ಏನ್ ಗೊತ್ತಾ?

Sagar, Shimoga | Aug 24, 2025
ಸಾಗರ ನಗರದ ನೆಹರು ನಗರದ ನಿವಾಸಿ ಹಾಗೂ ಗಜಾನನ ಸಾರಿಗೆ ಸಂಸ್ಥೆಯ ನಿವೃತ್ತ ಉದ್ಯೋಗಿ 73 ಬರ್ಷದ ಕೋಟಿ ಶೆಟ್ಟಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ. ಕೋಟಿ ಶೆಟ್ಟಿ ಅವರು ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಎರಡು ಕಣ್ಣುಗಳು ಸರಿಯಾಗಿ ಕಾಣದೆ ಇರುವುವರಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ನನ್ನ ಕುಟುಂಬಕ್ಕೆ ಸಮಸ್ಯೆ ಮಾಡಬೇಡಿ ಎಂದು ಬರೆದಿದ್ದಾರೆ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us