ಗಣೇಶ ಚತುರ್ಥಿ ಸಮೀಪಿಸುತ್ತಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮ, ಸಡಗರವನ್ನು ಮತ್ತಷ್ಟು ಹೆಚ್ಚಿಸಲು ಹು-ಧಾ ಮಹಾನಗರ ಪಾಲಿಕೆ ಇಕೋ ಭಕ್ತಿ ಸಂಭ್ರಮ ಎಂಬ ವಿನೂತನ ಪರಿಕಲ್ಪನೆಯ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಮುಂದಾಗಿದೆ ಎಂದು ಪಾಲಿಕೆ ಆಯುಕ್ತರು ರುದ್ರೇಶ್ ಘಾಳಿ ಗಂಟೆ ಸುಮಾರಿಗೆ ಹೇಳಿದರು.