ಲಾರಿ, ಕಾರು ಹಾಗೂ ಬೈಕ್ ನಡುವೆ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಬಾಲಕರು ಚಿಕಿತ್ಸೆಗೆ ಸ್ಪಂದಿಸದೆ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಚಾಮರಾಜನಗರದ ಕೆ.ಪಿ. ಮೊಹಲ್ಲಾದ ಮೆರಾನ್ (10) ಸ್ಥಳದಲ್ಲೇ ಮೃತಪಟ್ಟಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ಮೆರಾನ್ನ ಅಣ್ಣ ಫೈಜಲ್ ಹಾಗೂ ರಯಾನ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಇನ್ನೋರ್ವ ಬಾಲಕ ಅದಾನ್ ಪಾಷಾ ಎಂಬಾತನಿಗೆ ಚಿಕಿತ್ಸೆ ಮುಂದುವರೆದಿದೆ. ಘಟನೆಯಲ್ಲಿ, ಕಾರಿನ ಚಾಲಕ ಶ್ರೀಕಾಂತ್ (22) ಹಾಗೂ ಮಣಿಕಾಂತ್ (45) ಎಂಬ ಇಬ್ಬರಿಗೂ ಗಾಯಗಳಾಗಿದೆ.