Download Now Banner

This browser does not support the video element.

ಗದಗ: ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್. ವರ್ಗಾವಣೆ, ಜಿಲ್ಲಾಧಿಕಾರಿಗೆ ಹೆಚ್ಚುವರಿ ಜವಾಬ್ದಾರಿ

Gadag, Gadag | Aug 22, 2025
ಕರ್ನಾಟಕ ಸರ್ಕಾರವು ಶುಕ್ರವಾರ ಹೊರಡಿಸಿರುವ ಅಧಿಸೂಚನೆಯ ಮೂಲಕ ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಿಸಿದ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದ ಭರತ್ ಎಸ್, ಅವರನ್ನು ತಕ್ಷಣದಿಂದಲೇ ವರ್ಗಾವಣೆ ಮಾಡಿ, ಬೆಂಗಳೂರಿನ ಪ್ರೌಢಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿರುವ ಸಿ.ಎನ್. ಶ್ರೀಧರ ಅವರಿಗೆ ತಾತ್ಕಾಲಿಕವಾಗಿ ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.
Read More News
T & CPrivacy PolicyContact Us