ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಸೆಪ್ಟೆಂಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು'' ಎಂದರು.