ರಾಜ್ಯ ಸರ್ಕಾರ ವಿಜಯಪುರ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಮಂಗಳವಾರ ಮದ್ಯಾಹ್ನ 3ಗಂಟೆ ಸುಮಾರಿಗೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು ಕೂಡಲೇ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ಕೈಬಿಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುತ್ತಿವೆ ಎಂದು ಎಚ್ಚರಿಕೆ ನೀಡಿದರು.