ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ ಡಾ ರಾಜೇಂದ್ರ ಕೆ.ವಿ ಅವರು ಸೆಪ್ಟೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ನಗರ ಪಾಲಿಕೆಯ ವಾರ್ಡ್ 35ರ ಪೌರಕಾರ್ಮಿಕರ ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟ ಆಯುಕ್ತರು, ಪೌರಕಾರ್ಮಿಕರ ಹಾಜರಾತಿ ಪರಿಶೀಲಿಸಿ, ಅವರೊಡನೆ ಸಮಾಲೋಚಿಸಿ, ಸಿಬ್ಬಂದಿಗಳಿಗೆ ವ್ಯವಸ್ಥಿತ ತ್ಯಾಜ್ಯ ನಿರ್ವಹಣೆಗೆ ಅಗತ್ಯ ಸೂಚನೆಯನ್ನು ನೀಡಿದರು. ಅಲ್ಲದೇ ಇಂದಿರಾ ಕ್ಯಾಂಟೀನ್ ಸುತ್ತ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ತಿಳಿಸಿ, ಅಧಿಕಾರಿಗಳೊಂದಿಗೆ ಬೆಳಗಿನ ಉಪಹಾರ ಸೇವಿಸಿದರು