ಪಟ್ಟಣದ ವಿವಿಧ ಬಡಾವಣೆಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲ್ಲೂಕು ಘಟಕದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ಜಾಫರ್ ಷರೀಫ್ ಅವರಿಗೆ ಗುರುವಾರ ಮಧ್ಯಾಹ್ನ 3 ಗಂಟೆಯಲ್ಲಿ ಮನವಿಪತ್ರ ಸಲ್ಲಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ಈರಣ್ಣ ಮಾತನಾಡಿ, ಪಟ್ಟಣದ ಹಳೆಯ ಊರಿನಲ್ಲಿ ಹತ್ತು ದಿನಗಳಾದರೂ ನೀರು ಪೂರೈಸುತ್ತಿಲ್ಲ. ಪಟ್ಟಣದ 23 ವಾರ್ಡ್ಗಳಲ್ಲಿ ಜೆಜೆಎಂ ಪೈಪ್ಲೈನ್ ಕಾಮಗಾರಿ ಮಾಡಿ ರಸ್ತೆ ಸಂಪೂರ್ಣವಾಗಿ ಹಾಳುಗೆಡವಲಾಗಿದೆ. ಪಟ್ಟಣದ ಪ್ರಮುಖ ಮುಖ್ಯ ರಸ್ತೆಗಳಲ್ಲಿ ಸರಿಯಾದ ಬೀದಿ ದೀಪದ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು. ಪಟ್ಟಣದ ಆಪ್ ಬಂಡೆ, ಕನುಮನಚೆರ್ಲು ನಿವಾಸಿಗಳು ಬಂಡೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದು, ಮೂಲ ಸೌಕರ್ಯಗಳಿಂದ ವಂ