ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಲು ಮುಂದಾಗಿದೆ ಎಂದು ನಗರದಲ್ಲಿ ಜೆಡಿಎಸ್ ಮುಖಂಡ ಪ್ರವೀಣ್ ಜಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಳ ಮೀಸಲಾತಿ ಬಂಜಾರ ಸಮಾಜಕ್ಕೆ ಮರಣ ಶಾಸನವಾಗಿದೆ. ಈ ಹಿಂದಿದ್ದ ಮೀಸಲಾತಿಯನ್ನು ಮುಂದುವರಿಸಬೇಕೆಂದು ಆಗ್ರಹಿಸಿದ್ದರು. ಗುರುವಾರ 6 ಗಂಟೆಗೆ ನಗರದಲ್ಲಿ ಮಾತನಾಡಿದವರು, ಸರ್ಕಾರ ಬಂಜಾರ ಸಮುದಾಯದ ಮೇಲಿನ ಮಲತಾಯಿ ಧೋರಣೆ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದರು.