ಚಲಿಸುತ್ತಿದ್ದ ಗೂಡ್ಸ್ ವಾಹನದ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಘಟನೆ ಚಾಮರಾಜನಗರ ತಾಲೂಕಿನ ರಾಮಾಪುರ ಕ್ರಾಸ್ ಬಳಿ ನಡೆದಿದೆ. ಸದ್ಯ, ಅಪಘಾತದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನರ್ಸರಿಯ ಸಸಿಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಈ ವಾಹನದ ಟೈರ್ ಬ್ಲಾಸ್ಟ್ ಆಗಿ ರಾಮಾಪುರ ಕ್ರಾಸ್ ನಲ್ಲಿ ಪಲ್ಟಿಯಾದ ಮಾಹಿತಿ ಅರಿತ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ವಾಹನವನ್ನು ಕ್ರೇನ್ ಮೂಲಕ ಪಕ್ಕಕ್ಕೆ ಸರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.