ಬೀದರ್ - ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬಲಿ ಕೊಡುತ್ತಿದ್ದು, ಕೂಡಲೇ ಅವರನ್ನು ಬದಲಾವಣೆ ಮಾಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ತಿಳಿಸಿದ್ದಾರೆ. ಗುರುವಾರ ಸಂಜೆ 4 ಗಂಟೆಗೆ ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.