Download Now Banner

This browser does not support the video element.

ರಾಮನಗರ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಮರು ಮದುವೆಯಾದ ಜೋಡಿ

Ramanagara, Ramanagara | Sep 13, 2025
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದ, ಕೋರ್ಟ್ ಮೆಟ್ಟಿಲೇರಿದ್ದ ಜೋಡಿಯೊಂದು ಶನಿವಾರ ಒಂದಾದ ಘಟನೆಗೆ ಲೋಕ ಅದಾಲತ್ ಸಾಕ್ಷಿಯಾಯಿತು. ಕಳೆದ 5 ವರ್ಷದ ಹಿಂದೆ ಮದುವೆ ಆಗಿದ್ದ ನಾಗವೇಣಿ ಹಾಗೂ ಸುನೀಲ್ ಕುಮಾರ್ ಎಂಬ ದಂಪತಿಗಳು ಹೊಂದಾಣಿಕೆ ಜೀವನ ಸಾಗಿಸದೆ ಭಿನ್ನಾಭಿಪ್ರಾಯದಿಂದ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಈ ಜೋಡಿಗೆ ಪರಸ್ಪರ ಮನಸ್ತಾಪ ಮರೆತು ಜೀವನ ನಡೆಸುವಂತೆ ಲೋಕಾ ಅದಾಲತ್ ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ವಿ.ರೇಣುಕಾ ಅವರು ತಿಳಿಸಿದರು. ಅಂತ್ತಿಮವಾಗಿ ಪರಸ್ಪರ ಭಿನ್ನಾಭಿಪ್ರಾಯ ಮರೆತು ನ್ಯಾಯಾಧೀಶರ ಸಮ್ಮುಖದಲ್ಲಿ ಹೂವಿನ ಮಾಲೆ ಬದಲಿಸಿಕೊಂಡು ಮರು ಮದುವೆಯಾದರು.
Read More News
T & CPrivacy PolicyContact Us