ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಕೃಷ್ಣ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶನಿವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಬಿಸಿಲಿನಲ್ಲಿ ಸಾರ್ವಜನಿಕರ ಮನವಿ ಸ್ವೀಕರಿಸುತ್ತಿದ್ದರು. ಈ ಸಂದರ್ಭದಲ್ಲಿ ನೆರಳಿನ ವ್ಯವಸ್ಥೆ ಮಾಡಿದ ಹಿನ್ನೆಲೆ ಕೃಷ್ಣ ಜಲಾಶಯದ ಚೀಫ್ ಇಂಜಿನಿಯರ್ ಅನ್ನು ಕರೆದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತರಾಟೆಗೆ ತೆಗೆದುಕೊಂಡರು. ಒಂದು ನೆರಳಿನ ವ್ಯವಸ್ಥೆ ಕಲ್ಪಿಸಲು ಆಗದ ನಿಮಗೆ ಬುದ್ಧಿ ಇದೆಯಾ ಎಂದು ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಶಾಸಕರು ಸಚಿವರು ಉಪಸ್ಥಿತರಿದ್ದರು.