ಪಟ್ಟಣ ಸಮೀಪದ ಉಟಕನೂರು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಾಮಫಲಕಕ್ಕೆ ಸೆಗಣಿ ಎರಚಿ ಅಪಮಾನ ಮಾಡಿದ ಘಟನೆ ಆಗಸ್ಟ್ 29 ರ ಶುಕ್ರವಾರ ರಾತ್ರಿ ನಡೆದಿದೆ. ಇದನ್ನು ತಿಳಿದು ಸ್ಥಳಕ್ಕೆ ಆಗಮಿಸಿದ ಸಿ ಪಿ ಐ ಶಶಿಕಾಂತ ಮತ್ತು ಪಿಎಸ್ಐ ಗಂಗಪ್ಪ ಬುರ್ಲಿ ಅವರು ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ದುಷ್ಕರ್ಮಿಗಳು ಸಂಗೊಳ್ಳಿ ರಾಯಣ್ಣನ ನಾಮಫಲಕಕ್ಕೆ ಅಪಮಾನ ಮಾಡಿ ಮತ್ತು ಹಾಲುಮತ ಸಮಾಜವನ್ನು ಅಪಮಾನ ಮಾಡಿದ್ದಾರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಗ್ರಾಮಸ್ಥರು ಕವಿತಾಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಆಗಸ್ಟ್ 30 ರ ಶನಿವಾರ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ ಎಂದು ಪಿಎಸ್ಐ ತಿಳಿಸಿದ್ದಾರೆ.