Download Now Banner

This browser does not support the video element.

ಭದ್ರಾವತಿ: ಹೊಳೆಹೊನ್ನೂರಿನಲ್ಲ ಅಧಿಕಾರಿಗಳು ದಿಢೀರ್‌ ದಾಳಿ, 63 ಕೇಸ್‌ ದಾಖಲು

Bhadravati, Shimoga | Aug 22, 2025
ದಿಢೀರ್‌ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸಿದವರ ವಿರುದ್ಧ 63 ಪ್ರಕರಣ ದಾಖಲು ಮಾಡಿಕೊಂಡು 4800 ದಂಡ ಸಂಗ್ರಹಿಸಿದ್ದಾರೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ವಿವಿಧೆಡೆ ಶುಕ್ರವಾರ ಸಂಜೆ 5 ಗಂಟೆಗೆ ಕಾರ್ಯಾಚರಣೆ ನಡೆಸಲಾಯಿತು. ಇದೇ ವೇಳೆ ಸಾರ್ವಜನಿಕರಿಗೆ ಕೋಟ್ಪಾ ಕಾಯ್ದೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್ ಅರಸ್, ರವಿರಾಜ್, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಆನಂದಮೂರ್ತಿ, ಹೊಳೆ ಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Read More News
T & CPrivacy PolicyContact Us