ಕ್ರೀಡೆ ದೈಹಿಕ ಸಾಮಾರ್ಥ್ಯ ದ ಜೋತೆಗೆ ಮಾನಸಿಕ ಸಾಮಾರ್ಥ್ಯ ಹೆಚ್ಚಿಸುತ್ತದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದ್ದಾರೆ. ಆಗಸ್ಟ್ 28 ರಂದು ಮಧ್ಯಾಹ್ನ 1-30 ಗಂಟೆಗೆ ಹನಮಸಾಗರದಲ್ಲಿ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುದರು.ನಂತರ ಕ್ರೀಡಾಪಟುಗಳಿಂದ ಗೌರವ ವಂದನೆ ಶಾಸಕ ದೊಡ್ಡನಗೌಡ ಪಾಟೀಲ ಸ್ವೀಕರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ,ಶಾಲಾ ಸುಧಾರಣ ಸಮಿತಿಯ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣವರ, ಪ್ರಮುಖರಾದ ಬಸವರಾಜ ಹಳ್ಳೂರ್, ಶೇಖಪ್ಪ ಹಾಗೂ ವಿವಿಧ ಶಾಲೆಗಳಿಂದ ಬಂದಂತಹ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.