ವಿಪರೀತವಾಗಿ ಸುರಿದ ಮಳೆಯಿಂದ ಬೆಳೆಹಾನಿಯಾಗಿ ರೈತರು ಸಂಕಷ್ಟ ಎದುರಿಸುವಂತಾಗಿದೆ. ರೈತರಿಗೆ ಬೆಳೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಮಧ್ಯಾಹ್ನ 3 ಗಂಟೆಗೆ ರೈತರು ಪ್ರತಿಭಟನೆ ನಡೆಸಿದರು. ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹೆಸರು, ಸೋಯಾಬೀನ್, ಉದ್ದು, ಶೇಂಗಾ ಬೆಳೆ ಹಾನಿಯಾಗಿದ್ದು ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು ರೈತರ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.